ಕಳೆದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ವಾಹನದ ಮೇಲೆ ಪಾಕ್ ಪ್ರಾಯೋಜಿತ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿ 40ಕ್ಕೂ ಹೆಚ್ಚು ಯೋದರನ್ನು ಬಲಿ ತೆಗೆದುಕೊಂಡಿತ್ತು. ಮಾರನೇ ದಿನ ಗಡಿಯಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದವು. ಮೆಂಧಾರ್ ಮತ್ತು ಪೂಂಛ್ ಜಿಲ್ಲೆಗಳ ಗಡಿ ಭಾಗದಲ್ಲಿ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಈಗ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.