ನಾಲ್ಕು ವಾರದಲ್ಲಿ ರೂ.453 ಕೋಟಿ ಹಣ ಪಾವತಿಸಿ, ಇಲ್ಲವೇ ಜೈಲಿಗೆ ಹೋಗಿ: ಅನಿಲ್ ಅಂಬಾನಿಗೆ 'ಸುಪ್ರಿಂ' ಆದೇಶ

ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಮುಖಭಂಗವಾಗಿದೆ. ..
ಅನಿಲ್ ಅಂಬಾನಿ
ಅನಿಲ್ ಅಂಬಾನಿ
ನವದೆಹಲಿ: ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ  ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಮುಖಭಂಗವಾಗಿದೆ. 
ಎರಿಕ್ಸನ್‌ ಗೆ  ರಿಲಾಯನ್ಸ್ ಗ್ರೂಪ್ 550 ಕೋಟಿ ರು. ಹಣ ನೀಡಬೇಕಾಗಿದ್ದು, ಕೂಡಲೇ  4 ವಾರದಲ್ಲಿ  ಹಣವನ್ನು ಪಾವತಿಸುವಂತೆ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. 
ನಾಲ್ಕು ವಾರದಲ್ಲಿ  ರೂ.ಹಣ ಹಿಂದಿರುಗಿಸಿ ಅಥವಾ ಜೈಲು ಶಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಆದೇಶಿಸಿದೆ. 
ಎರಿಕ್ಸನ್‌ ಪ್ರಕರಣದಲ್ಲಿ ಅನಿಲ್ ಅಂಬಾನಿ ನ್ಯಾಯಾಂಗ ನಿಂದನೆ ಮಾಡಿರುವುದು ಸ್ಪಷ್ಟವಾಗಿದೆ. ಈ ಕೂಡಲೇ ಅವರು ಹಣ ಹಿಂದಿರುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ರಿಲಯನ್ಸ್‌ ಕಮ್ಯುನಿಕೇಷನ್ಸ್‌ ಕಂಪನಿ ಉದ್ದೇಶಪೂರ್ವಕವಾಗಿ ಹಣ ಹಿಂದಿರುಗಿಸಿಲ್ಲ. ಈ ಹಿಂದೆ ಸೂಚನೆ ನೀಡಿದ್ದರು ಅದನ್ನು ಪಾಲಿಸಿಲ್ಲ ಎಂದು ಸುಪ್ರೀಂಕೋರ್ಟ್‌ ನ್ಯಾಯಪೀಠ ಗಮನ ಸೆಳೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com