ಎರಿಕ್ಸನ್ ಪ್ರಕರಣದಲ್ಲಿ ಅನಿಲ್ ಅಂಬಾನಿ ನ್ಯಾಯಾಂಗ ನಿಂದನೆ ಮಾಡಿರುವುದು ಸ್ಪಷ್ಟವಾಗಿದೆ. ಈ ಕೂಡಲೇ ಅವರು ಹಣ ಹಿಂದಿರುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿ ಉದ್ದೇಶಪೂರ್ವಕವಾಗಿ ಹಣ ಹಿಂದಿರುಗಿಸಿಲ್ಲ. ಈ ಹಿಂದೆ ಸೂಚನೆ ನೀಡಿದ್ದರು ಅದನ್ನು ಪಾಲಿಸಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಗಮನ ಸೆಳೆದಿದೆ.