2014ರ ಲೋಕಸಭಾ ಚುನಾವಣೆಯ ಮೈತ್ರಿಯನ್ನು ಬಳಿಕ ಕಡಿದುಕೊಂಡಿದ್ದ ಶಿವಸೇನೆ ಇದೀಗ ಮತ್ತೆ ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದು, ಜಂಟಿಯಾಗಿಯೇ ಲೋಕಸಭಾ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡಿದೆ. ತನ್ನ ಈ ದಿಢೀರ್ ಅಚಚ್ಚರಿ ನಿರ್ಧಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, 'ಬಿಜೆಪಿ ಈಗ ಮೈತ್ರಿಯನ್ನು ನೋಡುತ್ತಿರುವ ಮನೋಭಾವ ಬದಲಿಸಿಕೊಂಡಿದೆ. ಇದೇ ಕಾರಣಕ್ಕೆ ಮತ್ತೆ ಮೈತ್ರಿ ಸಾಧ್ಯವಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದರು.