ಫೆಬ್ರವರಿ 14ರಂದು 40 ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಅವಂತಿಪೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈಗ ಅದನ್ನು ಎನ್ಐಎಗೆ ವರ್ಗಾಯಿಸಲಾಗಿದೆ. ಹೀಗಾಗಿ ಎನ್ಐಎ ತನಿಖೆಗೆ ಪೊಲೀಸರು, ಸೇನೆ ಹಾಗೂ ಗುಪ್ತಚರ ಇಲಾಖೆ ಸಹಾಯ ಮಾಡಲಿವೆ ಎಂದು ಅವರು ತಿಳಿಸಿದ್ದಾರೆ.