ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನ ಮಾನ ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ತಿರುಪತಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನ ಮಾನ ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.
ಇಂದು ತಿರುಪತಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿ ಮಾತನಾಡಿದ ರಾಹುಲ್,  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ  ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಒಬ್ಬ ಸುಳ್ಳುಗಾರ. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಸುಳ್ಳು ಹೇಳಿದ್ದರು ಎಂದು ರಾಹುಲ್ ತೀವ್ರ ವಾಗ್ದಾಳಿ ನಡೆಸಿದರು.
ಪುಲ್ವಾಮಾ ಉಗ್ರದಾಳಿ ನಡೆದು ಕೇವಲ ಅರ್ಧ ಗಂಟೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಮಾತ್ರ ಫೋಟೋಶೂಟ್ ನಲ್ಲಿ ತೊಡಿಗಿದ್ದರು. ಅತ್ತ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರೆ, ಇತ್ತ ಮೋದಿ ಸಾಕ್ಷ್ಯಚಿತ್ರಕ್ಕಾಗಿ ಫೋಟೋಶೂಟ್ ನಲ್ಲಿ ತೊಡಗಿದ್ದು ನಾಚಿಕೆಗೇಡಿತನ ಎಂದು ರಾಹುಲ್ ಟೀಕಿಸಿದ್ದಾರೆ.
40ಕ್ಕೂ ಹೆಚ್ಚು ಭಾರತೀಯ ಯೋಧರು ಉಗ್ರ ದಾಳಿಯಲ್ಲಿ ಮೃತಪಟ್ಟಿದ್ದು ಇದಕ್ಕೆ ದೇಶವೇ ಕಂಬನಿ ಮಿಡಿಯುತ್ತಿದ್ದರೆ ಪ್ರಧಾನಿಗಳು ಮಾತ್ರ ಸಂಜೆಯವರೆಗೂ ಫೋಟೋಶೂಟ್ ನಲ್ಲಿ ನಿರತರಾಗಿದ್ದರು. ಇವರು ದೇಶದ ಪ್ರಧಾನಿಯಲ್ಲ ಪ್ರೈಮ್ ಟೈಮ್ ಪ್ರಧಾನಿಯೆಂದು ರಾಹುಲ್ ಗಾಂಧಿ ಜರಿದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com