ದೆಹಲಿಗೆ ಸಂಪೂರ್ಣ ರಾಜ್ಯ ನೀಡಬೇಕು ಎಂದು ಆಗ್ರಹಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವಂತೆಯೇ, ತಮ್ಮದೇ ರಾಜ್ಯದ ಸಿಎಂ ವಿರುದ್ಧ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗಂಭೀರ್, ದೆಹಲಿಯಲ್ಲಿ 2 ಕೋಟಿ ಜನಸಂಖ್ಯೆ, ಸಾವಿರಾರು ಸಮಸ್ಯೆಗಳಿವೆ. ಆದರೆ ಪರಿಹಾರವೇನು.. ಮತ್ತೋರ್ವ ಸಿಎಂ ಕೇಜ್ರಿವಾಲ್ ಧರಣಿ ಎಂದು ಟ್ವೀಟ್ ಮಾಡಿದ್ದಾರೆ.