ಜಮ್ಮು-ಕಾಶ್ಮೀರ: ಪುಲ್ವಾಮಾ ದಾಳಿ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಹೇಳಿಕೆಗೆ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ ಹೃದಯದ ಭಾವನೆಗಳಿಗೆ ಸ್ಪಂದಿಸಿದ ನರೇಂದ್ರ ಮೋದಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.
ರಾಜಸ್ತಾನದ ಟೊಂಕ್ ಜಿಲ್ಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಶ್ಮೀರಿಗಳ ವಿರುದ್ಧ ನಮ್ಮ ಹೋರಾಟವಲ್ಲ ಎಂದಿದ್ದರು.
Advertisement