ಟೊಂಕ್: ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಯೋತ್ಪಾದನೆ ನಿರ್ಮೂಲನೆ ನಿಟ್ಟಿನಲ್ಲಿ ತೀವ್ರ ಹೋರಾಟ ನಡೆಸಬೇಕಾಗಿದೆ. ಆದರೆ, ಕಾಶ್ನೀರಿ ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ನಿಲ್ಲಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾಶ್ಮೀರಿಗಳ ವಿರುದ್ಧ ನಾವು ಹೋರಾಟ ಮಾಡಲ್ಲ, ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವುದಾಗಿ ರಾಜಸ್ತಾನದ ಟೊಂಕ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನರೇಂದ್ರ ಮೋದಿ ಹೇಳಿದರು.
Advertisement