ಈ ಬಗ್ಗೆ ಹವಾಮಾನ ವರದಿ ಸಂಸ್ಥೆ ಸ್ಕೈಮೆಟ್ ವರದಿ ಬಿಡುಗಡೆ ಮಾಡಿದ್ದು, ಈ ವರ್ಷ ಭಾರತದಲ್ಲಿ ಮುಂಗಾರು ಮಳೆ ಸಾಧಾರಣವಾಗಿ ಇರುವ ಸಾಧ್ಯತೆ ಇದೆ ಎಂದು ಹೇಳಿದೆ. ದೇಶದ ಏಕೈಕ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್, 'ರೈತರು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯ ನಿರೀಕ್ಷೆ ಇದೆ. ಈ ಮೂಲಕ ಈ ವರ್ಷ ಬೆಳೆ ಉತ್ತಮವಾಗಿರಲಿದ್ದು, ದೇಶದ ಆರ್ಥಿಕ ಬೆಳವಣಿಗೆ ಹೆಚ್ಚಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.