ನವದೆಹಲಿ; ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ವಿರೋಧ ಪಕ್ಷಗಳ ನಾಯಕರು ನಾಳೆ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಿ ಯೋಜನೆ ರೂಪಿಸಲಿದ್ದಾರೆ.
ಪಾರ್ಲಿಮೆಂಟ್ ಹೌಸ್ ಲೈಬ್ರೆರಿಯಲ್ಲಿ ಎಲ್ಲಾ ಪ್ರತಿಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು ಲೋಕಸಭೆ ಚುನಾವಣೆಯಲ್ಲಿ ಸಾಮೂಹಿಕವಾಗಿ ಕಾರ್ಯತಂತ್ರ ರೂಪಿಸಿ ಬಿಜೆಪಿ ವಿರುದ್ಧ ಹೋರಾಡುವ ಕುರಿತು ಚರ್ಚೆ ನಡೆಸಲಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳು ಚುನಾವಣಾ ಕಾರ್ಯತಂತ್ರ ರೂಪಿಸಲಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತು ಸಹ ವಿರೋಧ ಪಕ್ಷಗಳು ಚರ್ಚೆ ನಡೆಸಿ ಕಾರ್ಯತಂತ್ರ ರೂಪಿಸಲಿವೆ.