ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಲು, ಫೆ.25 ರಂದು ರಾತ್ರಿ ಭಾರತೀಯ ವಾಯುಪಡೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ತರಬೇತಿ ಕ್ಯಾಂಪ್ ಗಳ ಮೇಲೆ ಬಾಂಬ್ ದಾಳಿ ನಡೆಸಿ ಕನಿಷ್ಟ 300 ಉಗ್ರರನ್ನು ಭಸ್ಮ ಮಾಡಿತ್ತು. ಈ ಬೆನ್ನಲ್ಲೇ ಫೆ.26 ರಂದು ರಾಜಸ್ಥಾನದ ಚುರುವಿನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, 2014 ರಲ್ಲಿ ತಾವು ಚುರುವಿನಲ್ಲೇ ಹೇಳಿದ್ದ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.