ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಸಿಆರ್ಪಿಎಫ್ ಯೋಧರು 'ರಾಜಕೀಯ ಬಲಿಪಶು'ಗಳು ಎಂದು ಹೇಳಿರುವ ರಾಜ್ ಠಾಕ್ರೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ವಿಚಾರಣೆ ನಡೆಸಿದರೆ ಸತ್ಯ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದಾರೆ. 'ಒಂದು ವೇಳೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಪುಲ್ವಾಮ ಭಯೋತ್ಪಾದಕ ದಾಳಿ ಕುರಿತಂತೆ ವಿಚಾರಣೆ ನಡೆಸಿದರೆ, ಸತ್ಯ ಹೊರಬರಲಿದೆ. ಪುಲ್ವಾಮ ದಾಳಿ ಸಂದರ್ಭ ಪ್ರಧಾನಿ ಮೋದಿ ಅವರು ಕಾರ್ಬೆಟ್ ನ್ಯಾಶನಲ್ ಪಾರ್ಕ್ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಭಯೋತ್ಪಾದಕ ದಾಳಿಯ ಸುದ್ದಿ ಹರಡಿದರೂ ಅವರು ಶೂಟಿಂಗ್ ಅನ್ನು ಮುಂದುವರಿಸಿದ್ದರು. ಇದನ್ನು ಗಮನಿಸಿದರೆ ಪುಲ್ವಾಮ ದಾಳಿಯ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿರಬಹುದು ಎಂಬ ಶಂಕೆ ಮೂಡುತ್ತದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.