ಯುದ್ಧ ವಾತಾವರಣ: ಸಿಡಬ್ಲ್ಯುಸಿ ಸಭೆ ರದ್ದುಗೊಳಿಸಿದ ಕಾಂಗ್ರೆಸ್

ಭಾರತ - ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆ ಅಹ್ಮದಾಬಾದ್‌ ನಲ್ಲಿ ನಡೆಯಬೇಕಿದ್ದ ಕಾರ್ಯಕಾರಿ ಸಮಿತಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಭಾರತ - ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆ ಅಹ್ಮದಾಬಾದ್‌ ನಲ್ಲಿ ನಡೆಯಬೇಕಿದ್ದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಸಂಕಲ್ಪ ರ್ಯಾಲಿಯನ್ನು ಮುಂದೂಡಿದೆ.
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಸ್ಥಿತಿಯಲ್ಲಿ ನಾವು ದೇಶದ ಪರವಾಗಿ ನಿಲ್ಲಬೇಕಾಗಿದೆ. ಹೀಗಾಗಿ ಸಿಡಬ್ಲ್ಯುಸಿ ಸಭೆಯನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್‌ ಸುರ್ಜೇವಾಲಾ ಅವರು ಹೇಳಿದ್ದಾರೆ. 
ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಅಹ್ಮದಾಬಾದ್‌ ನಲ್ಲಿನ ತಮ್ಮ ಸಾರ್ವಜನಿಕ ಸಭೆಗಳನ್ನು ಸಹ ರದ್ದು ಪಡಿಸಿದ್ದಾರೆ ಎಂದ ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com