ಪ್ರಧಾನಿ ನರೇಂದ್ರ ಮೋದಿ ಜತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತುಕತೆಗೆ ಸಿದ್ಧರಾಗಿದ್ದಾರೆ. ಮಾತುಕತೆಗೆ ಮುಂದಾದರೆ ನಾನು ಅಭಿನಂದನ್ ರನ್ನು ಬಿಡುಗಡೆ ಮಾಡುತ್ತೇವೆ ಎಂದು ಪಾಕ್ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ವಿದೇಶಾಂಗ ಸಚಿವಾಲಯ ಕೂಡಲೇ ಭಾರತೀಯ ಪೈಲಟ್ ರನ್ನು ವಾಪಸ್ ಕಳುಹಿಸಿಕೊಡಬೇಕು. ಇನ್ನು ಪೈಲಟ್ ಬಿಡುಗಡೆಗೆ ಯಾವುದೇ ಷರತ್ತಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.