ಇಸ್ಲಾಮಾಬಾದ್: ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಭಾರತದೊಂದಿಗೆ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಗುರುವಾರ ಹೇಳಿದ್ದಾರೆ.
ಎರಡು ಪ್ರಾದೇಶಿಕ ಪ್ರದೇಶದಲ್ಲಿ ಸ್ಥಿರತೆ ಹಾಗೂ ಶಾಂತಿ ಸ್ಥಾಪಿಸಲು ಇರುವ ಏಕೈಕ ಮಾರ್ಗ ಮಾತುಕತೆ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ.
ಪುಲ್ವಾಮ ಉಗ್ರ ದಾಳಿ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಭಾರತಕ್ಕೆ ಈಗಾಗಲೇ ತಿಳಿಸಿದ್ದೇನೆ. ಹಾಗೇ, ದ್ವಿಪಕ್ಷೀಯ ಸಂಬಂಧಗಳ ಕುರಿತು ಭಾರತದೊಂದಿಗೆ ಚರ್ಚಿಸಲು ಸಿದ್ಧ ಎಂದು ಇಮ್ರಾನ್ ಖಾನ್ ಸಂಪುಟ ಸಭೆಯಲ್ಲಿ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನ ಹಾಗೂ ಭಾರತ ನಡುವೆ ಉಂಟಾಗಿರುವ ಇಂತಹ ಉದ್ವಿಗ್ನ ಸ್ಥಿತಿಯಲ್ಲಿ ಯಾವ ರೀತಿಯ ಕಾರ್ಯಾಚರಣೆ ನಡೆಸಬಹುದು ಎಂಬ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು.