ಹುತಾತ್ಮ ಯೋಧರ ಕುಟುಂಬ ಸದಸ್ಯರ ಮುಖದಲ್ಲಿ ನೋವನ್ನು ಕಂಡಿದ್ದೇನೆ, ವಿಧ್ವಂಸಕಾರಿಯಾಗಿ ಯೋಚನೆ ಮಾಡುವುದು ಸುಲಭ ಆದರೆ ಅದು ನಮ್ಮನ್ನು ಸುರಕ್ಷಿತವಾಗಿಸುವುದಿಲ್ಲ. ನಮ್ಮ ಹೋರಾಟವೇನಿದ್ದರೂ ಭಯೋತ್ಪಾದನೆ ವಿರುದ್ಧ ಹಾಗೂ ಮಾನವಿಯತೆಯ ಶತ್ರುಗಳ ವಿರುದ್ಧ, ನಮ್ಮ ಹೋರಾಟ ಕಾಶ್ಮೀರಿಗಳ ಪರವಾಗಿಯೆ ಹೊರತು ಕಾಶ್ಮೀರದ ವಿರುದ್ಧವಾಗಿ ಅಲ್ಲ ಎಂದು ಪ್ರಧಾನಿ ಮೋದಿ ಸಹ ಹೇಳಿದ್ದಾರೆ.