ಈ ಹಿಂದೆ ಖರ್ಗೆ ಅಂತೆಯೇ ರಾಫೆಲ್ ಒಪ್ಪಂದದ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಜೇಟ್ಲಿ, ರಾಫೆಲ್ ಬಗ್ಗೆ ಚರ್ಚೆ ಆರಂಭಿಸಿ, ನಾವು ಉತ್ತರಕ್ಕೆ ಸಿದ್ಧರಿದ್ದೇವೆ. ಕಾಂಗ್ರೆಸ್ ಸುಳ್ಳು ಪ್ರಚಾರದಲ್ಲಿ ತೊಡಗಿದೆ ಎಂದು ನಿರೂಪಿಸುತ್ತೇವೆ,' ಎಂದು ಜೇಟ್ಲಿ ಸವಾಲು ಎಸೆದರು. ಆಗ ಖರ್ಗೆ ಅವರು ಸವಾಲು ಒಪ್ಪಿರುವುದಾಗಿ ತಿಳಿಸಿದರು.