ಮುಂಬೈ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನ್ನು ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ದೀಪಗಳಿಂದ ಅಲಂಕಾರಗೊಳಿಸಲಾಗಿದ್ದರೆ, ಇತ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಮನೆಯನ್ನು ದೀಪಗಳಿಂದ ಸಿಂಗರಿಸಲಾಗಿತ್ತು. ಇನ್ನು ಬೆಂಗಳೂರಿನ ಬ್ರಿಗೇಡ್, ಎಂ ಜಿ ರಸ್ತೆಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ದೇಶದ ಜನತೆ 2019 ನ್ನು ಅದ್ಧೂರಿ ಸಂಭ್ರಮಾಚರಣೆಯಲ್ಲಿ ತೊಡಗುವ ಮೂಲಕ ಸ್ವಾಗತಿಸಿದೆ.