ರಾಮ ಮಂದಿರಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಬಹುದು ಎಂಬ ಪ್ರಧಾನಿ ಮೋದಿ ಹೇಳಿಕೆ ಬೆನ್ನಲ್ಲೇ ಆರ್ ಎಸ್ಎಸ್ ನ ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇದೇ ಅವಧಿಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭಿಸಬೇಕು, ರಾಮಮಂದಿರ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ 2014 ರಲ್ಲಿ ಮೋದಿ ಪ್ರಣಾಳಿಕೆ ಭರವಸೆ ನೀಡಿತ್ತು ಹೇಳಿದ್ದಾರೆ.