ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಆಕ್ರೋಶಗೊಂಡಿರುವ ಮೆಹಬೂಬಾ ಮುಫ್ತಿ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, "ಓರ್ವ ಮುಸ್ಲಿಮ್ ಆಗಿದ್ದು, ಮುರಿದು ಬಿದ್ದ ವಿವಾಹದ ಪರಿಸ್ಥಿತಿಗಳನ್ನು ಎದುರಿಸಿರುವ ಮಹಿಳೆಯಾಗಿ, ಮುಸ್ಲಿಮರ ಕುಟುಂಬದ ರಚನೆಯ ಮೇಲೆ ಪ್ರಹಾರ ನಡೆಯುತ್ತಿದ್ದಾಗ ಮಾತನಾಡಬೇಕಾಗಿರುವುದು ನನ್ನ ಕರ್ತವ್ಯವಾಗಿದೆ ಎಂದು ಮುಫ್ತಿ ಹೇಳಿದ್ದಾರೆ.