ಖ್ಯಾತ ಧಾರ್ಮಿಕ ತಾಣ ಶಬರಿಮಲೆಯಲ್ಲಿ ಮಹಿಳೆಯರು ಪ್ರವೇಶ ಮಾಡಿ ಅಯ್ಯಪ್ಪ ದರ್ಶನ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಅವರು, ಶಬರಿಮಲೆಯಲ್ಲಿ ಎಲ್ಲ ರೀತಿಯ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಾಗಿಲ್ಲ. ಶಬರಿಮಲೆಗೆ ಆಗಮಿಸುವ ಭಕ್ತರಿಗೆ ಭದ್ರತೆ ನೀಡುವುದು ನಮ್ಮ ಜವಾಬ್ದಾರಿ.. ಆದರೆ ಭಕ್ತರ ವಯಸ್ಸಿನ ಪರಿಶೀಲನೆ ನಮ್ಮ ಹೊಣೆಯಲ್ಲ ಎಂದು ಹೇಳಿದ್ದಾರೆ.