ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಾಲಯದ ಮುಖ್ಯ ಅರ್ಚಕನಾಗಿರುವ ಕೃಷ್ಣಕಾಂತಾಚಾರ್ಯ ಧಾರ್ಮಿಕ ಪ್ರವಚನಗಳನ್ನು ನೀಡುತ್ತಿದ್ದ. ಡಿ.24 ರಂದು ಧಾರ್ಮಿಕ ಪ್ರವಚನ ಕೇಳಲು ಬಂದಿದ್ದ ಮಹಿಳೆಯನ್ನು ದೇವಾಲಯದ ಆವರಣದಲ್ಲೇ ಉಳಿಯುವಂತೆ ಸೂಚಿಸಿದ ಅರ್ಚಕ ಆಕೆಯನ್ನು ತನ್ನ ವಶದಲ್ಲಿಟ್ಟುಕೊಂಡು ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಆದರೆ ಅರ್ಚಕನಿಂದ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡುವುದರಲ್ಲಿ ಮಹಿಳೆ ಯಶಸ್ವಿಯಾಗಿದ್ದು, ಪೊಲೀಸರು ಆಕೆಯನ್ನು ರಕ್ಷಿಸಿ ಅರ್ಚಕನನ್ನು ಬಂಧಿಸಿದ್ದಾರೆ.