ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಎಐಎಡಿಎಂಕೆ ಸಂಸದರು ಮತ್ತೆ ಮೇಕೆದಾಟು ಬ್ಯಾನರ್ ಹಿಡಿದು ಹಾಗೂ ಟಿಡಿಪಿ ಸಂಸದರು ವಿಶೇಷ ಸ್ಥಾನಮಾನಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದಾಖಲೆ ಪತ್ರಗಳನ್ನು ಹರಿದು ಲೋಕಸಭೆ ಸಚಿವಾಲಯದ ಅಧಿಕಾರಿಗಳು ಕುಳಿತಿದ್ದ ಸ್ಥಳದತ್ತ ತೂರಿ ಆಕ್ರೋಶ ವ್ಯಕ್ತಪಡಿಸಿದರು. ಈ ವರ್ತನೆಯಿಂದ ಬೇಸತ್ತ ಸ್ಪೀಕರ್ ಪ್ರತಿಭಟನಾ ನಿರತ ಸಂಸದರನ್ನು 4 ದಿನಗಳ ಮಟ್ಟಿಗೆ ಅಮಾನತುಗೊಳಿಸಿ, ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.