ಮಹಿಳೆ ಶಬರಿಮಲೆಗೆ ತೆರಳಿದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಪಂಪಾ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಹಿಳೆ ಶಶಿಕಲಾ ಅವರು, 'ನನ್ನನ್ನು ಪೊಲೀಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ. ನಾನು ಅಯ್ಯಪ್ಪನ ನಿಜವಾದ ಭಕ್ತೆ. 48 ದಿನ ಮಾಲೆ ಧರಿಸಿ ದೇವರನ್ನು ಆರಾಧಿಸಿದ್ದೇನೆ. ನಾನು ಯಾರಿಗೂ ಭಯಪಡಲಾರೆ. ಅವರೇಕೆ ನನ್ನನ್ನು ತಡೆಯಬೇಕು. ನನ್ನ ಬಳಿ ವೈದ್ಯಕೀಯ ದಾಖಲೆಗಳಿವೆ. 48 ವರ್ಷ ಪೂರೈಸಿರುವ ನನ್ನ ಗರ್ಭಕೋಶವನ್ನು ಕಾರಣಾಂತರಗಳಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆದು ಹಾಕಲಾಗಿದೆ. ಈ ಬಗ್ಗೆ ನಾನು ವೈದ್ಯಕೀಯ ದಾಖಲೆ ಹೊಂದಿದ್ದೇನೆ. ಆದರೂ ನನ್ನನ್ನು ದೇವರ ದರ್ಶನಕ್ಕೆ ಬಿಡಲಿಲ್ಲ' ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.