ಇನ್ನು ಪ್ರಸ್ತುತ ಮಕೇನ್ ಅವರು ವೈಯುಕ್ತಿಕ ಹಾಗೂ ಅನಾರೋಗ್ಯದ ಕಾರಣ ನೀಡಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆಯಾದರೂ, ಮಕೇನ್ ರಾಜಿನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ ತಂತ್ರಗಾರಿಕೆ ಅಡಗಿದೆ ಎಂದು ಹೇಳಾಗುತ್ತಿದೆ. ಹೌದು.. ಮುಂಬರುವ 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ತನ್ನ ಹಿರಿಯ ನಾಯಕರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆಯುತ್ತಿದೆ. ಇದೇ ಕಾರಣಕ್ಕೆ ಅಜಯ್ ಮಕೇನ್ ರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆಯಲು ರಾಜಿನಾಮೆ ಕೊಡಿಸಲಾಗಿದೆ ಎಂದು ಹೇಳಲಾಗುತ್ತಿದೆ.