ಗೋವಾ ಸಿಎಂ ಪರಿಕ್ಕರ್'ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ

ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು...
ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
ಪಣಜಿ: ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು, ಅವರಿಗೆ ಭದ್ರತೆ ಹೆಚ್ಚಿಸಬೇಕೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಕಾಂಗ್ರೆಸ್ ಪತ್ರ ಬರೆದಿದೆ. 
ಗೋವಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಛೋಡಂಕರ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ರಫೇಲ್ ಕಡತಗಳನ್ನು ಪರಿಕ್ಕರ್ ಮನೆಯಿಂದ ಹೊತ್ತೊಯ್ಯಲು ಯತ್ನಗಳು ನಡೆಯುವ ಸಾಧ್ಯತೆಗಳಿದ್ದು. ಇದರಿಂದಾಗಿ ಪರಿಕ್ಕರ್ ಅವರ ಜೀವಕ್ಕೆ ಅಪಾಯವಿದೆ. ಭ್ರಷ್ಟಾಚಾರ ಮುಚ್ಚಿಹಾಕಲು ಇಂತಹ ಯತ್ನಗಳು ನಡೆಯಬಹುದು ಎಂದು ತಿಳಿಸಿದ್ದಾರೆ. 
ಇತ್ತೀಚೆಗೆ ಗೋವಾ ಸಚಿವ ವಿಶ್ವಜಿತ್ ರಾಣೆ ಅವರ ರೀತಿ ಧ್ವನಿಯಿದ್ದ ಆಡಿಯೋ ಟೇಪ್ ವೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಅದರಲ್ಲಿ ರಾಣೆ, ತಮ್ಮ ಬೆಡ್ ರೂಮಲ್ಲಿ ರಫೇಲ್ ಕಡತಗಳಿವೆ ಎಂದು ಪರಿಕ್ಕರ್ ಸಂಪುಟ ಸಭೆಯಲ್ಲಿ ಹೇಳಿದ್ದರು ಎಂದು ಪತ್ರಕರ್ತರೊಬ್ಬರ ಎದುರು ಹೇಳುವ ಅಂಶವಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com