ಹತಾಶೆಯಿಂದ ಮೋದಿ ನನ್ನನ್ನು ಟಾರ್ಗೆಟ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ಅಮರಾವತಿ: ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು  ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

 ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮಗನನ್ನು ರಾಜಕೀಯಕ್ಕೆ ಕರೆತರಲಾಗುತ್ತಿದೆ ಎಂಬರ್ಥದಲ್ಲಿ ಪ್ರಧಾನಿ ಮೋದಿ ನಿನ್ನೆ ನೀಡಿದ ಸನ್ ರೈಸ್  ಹೇಳಿಕೆ  ವಿರುದ್ಧ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ

ಆಂಧ್ರಪ್ರದೇಶ ಆಡಳಿತದಲ್ಲಿ   ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್ ಅವರನ್ನು ಬೆಳೆಸಲು ನಾಯ್ಡು ಪ್ರಯತ್ನಿಸುತ್ತಿದ್ದಾರೆ ಎಂಬುದಕ್ಕೆ  ಸನ್ ರೈಸ್ ಎಪಿ ಎಂಬ ಟ್ಯಾಗ್ ಲೈನ್ ಬಳಸಿ ಪ್ರಧಾನಿ ಮೋದಿ ನಿನ್ನೆ ಲೇವಡಿ ಮಾಡಿದ್ದರು.

ಆಂಧ್ರಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವವರು ತೆಲುಗು ಜನರ ಹಿತಾಸಕ್ತಿಯನ್ನು ನಿರ್ಲಕ್ಷಿಸಿ  ಅಧಿಕಾರ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ತೆಲುಗು ದೇಶಂ ಸ್ಥಾಪಕ ಎನ್ ಟಿಆರ್ ಅವರಿಗೆ ಮೋಸ ಮಾಡಲಾಗಿದೆ ಎಂದು ಮೋದಿ ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಹೇಳಿಕೆ ನೀಡಿದ್ದರು.

ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಬೆಳವಣಿಗೆ ಬಗ್ಗೆ ಮೋದಿಗೆ ಹೊಟ್ಟೆ ಕಿಚ್ಚು, ಹತಾಸೆಯಿಂದಾಗಿ ಈ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.

ಆಂಧ್ರಪ್ರದೇಶ ಎಲ್ಲಾ ವಲಯಗಳಲ್ಲಿ ನೂರಾರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಆದ್ದರಿಂದಾಗಿ ಮೋದಿಗೆ ಹೊಟ್ಟೆ ಉರಿ ಹೆಚ್ಚಾಗಿದೆ. ಅದ್ದರಿಂದ ಈ ರೀತಿಯ ಉದ್ದಟತನದ  ಮಾತುಗಳನಾಡುತ್ತಿದ್ದಾರೆ ಎಂದು ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.
ಆಂಧ್ರಪ್ರದೇಶದ ಬಗ್ಗೆ ಕೇಂದ್ರಸರ್ಕಾರ ತಾರತಾಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com