ಮೂಲಗಳ ಪ್ರಕಾರ ಕರ್ನಾಟಕ-ತಮಿಳುನಾಡು ಗಡಿ ಭಾಗದ ಕೃಷ್ಣಗಿರಿ ಜಿಲ್ಲೆಯ ಡೆಂಕನಿಕೋಟೆಯ ಶೂಲಗಿರಿಯಲ್ಲಿ ಈ ಘಟನೆ ನಡೆದಿದ್ದು, ಆನೆ ದಾಳಿಗೆ ಸುಮಾರು 48 ವರ್ಷದ ಅರಣ್ಯಾಧಿಕಾರಿ ಮಾರಪ್ಪನ್ ಎಂಬುವವರು ಸಾವನ್ನಪ್ಪಿದ್ದಾರೆ. ನಿನ್ನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಡೆಂಕನಿಕೋಟೆ ಬಳಿಯ ಶೂಲಗಿರಿ ಗ್ರಾಮಕ್ಕೆ ಆನೆಗಳ ಹಿಂಡು ನುಗ್ಗಿದ್ದವು. ವಿಚಾರ ತಿಳಿದ ಕೂಡಲೇ ಅವುಗಳನ್ನು ಮತ್ತೆ ಕಾಡಿಗೆ ಅಟ್ಟಲು ಅರಣ್ಯಾಧಿಕಾರಿಗಳ ತಂಡ ದೌಡಾಯಿಸಿತ್ತು.