ಸದ್ಯ ಪಶ್ಚಿಮ ಬಂಗಾಳದಲ್ಲಿ ಸಿಂಡಿಕೇಟ್ ರಾಜ್ ಮತ್ತು ಪೊಲೀಸ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ. ದಿನ ಕಳೆದಂತೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ತೃಣಮೂಲ ಕಾಂಗ್ರೆಸ್ ಗೂಂಡಗಳಿಗೆ ಬೆಂಬಲ ನೀಡುತ್ತಿದೆ. ದಿನ ಬೆಳಗೆದ್ದರೆ ರಾಜ್ಯದಲ್ಲಿ ಕೊಲೆ ಮತ್ತು ಬಾಂಬ್ ದಾಳಿಗಳು ನಡೆಯುತ್ತಿವೆ ಎಂದು ಟಿಎಂಸಿ ವಿರುದ್ಧ ಕಿಡಿಕಾರಿದರು.