ಎಂಎನ್ ಎಸ್ ಪಕ್ಷದ ಮೂಲಗಳ ಪ್ರಕಾರ ಮುಂಬರವು ಲೋಕಸಭಾ ಚುನಾವಣೆಯಲ್ಲಿ ಎಂಎನ್ಎಸ್ ಪಕ್ಷ ಕಾಂಗ್ರೆಸ್ ಬೆಂಬಲಿತ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗಿದ್ದು, ಇದೇ ಕಾರಣಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೇರಿದಂತೆ ಸುಶೀಲ್ ಕುಮಾರ್ ಶಿಂಧೆ, ಪೃಥ್ವಿರಾಜ್ ಚೌಹಾಣ್, ಮಿಲಿಂದ್ ಡಿಯೋರ ಅವರನ್ನು ಆಹ್ವಾನಿಸಲು ಠಾಕ್ರೆ ನಿರ್ಧರಿಸಿದ್ದಾರೆ. ಜೊತೆಗೆ, ಎನ್ಸಿಪಿ ನಾಯಕರಾದ ಶರದ್ ಪವಾರ್, ಅಜಿತ್ ಪವಾರ್, ಸುನೀಲ್ ತತ್ಕರೆ, ಜಯಂತ್ ಪಾಟೀಲ್ ಮುಂತಾದ ನಾಯಕರನ್ನು ಆಹ್ವಾನಿಸಿದ್ದಾರೆ. ಆದರೆ, ಈ ವಿವಾಹದ ಆಹ್ವಾನಿತರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೇ ಇಲ್ಲ.