ಬಿಜೆಪಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವುದಕ್ಕೆ ದೆಹಲಿಯಲ್ಲಿ ಬೀಡು ಬಿಟ್ಟಿರುವ ಶಾಸಕರನ್ನು ಗುರುಗ್ರಾಮಕ್ಕೆ ಶಿಫ್ಟ್ ಮಾಡುತ್ತಿದೆ. ಸಂಜೆ 6 ಗಂಟೆಗೆ ಸಿದ್ಧವಾಗಿರುವಂತೆ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಶಾಸಕರಿಗೆ ಸೂಚನೆ ನೀಡಿದ್ದಾರೆ. ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಬಿಜೆಪಿ ಶಾಸಕರನ್ನು ಸೆಳೆಯುವುದಕ್ಕೆ ಸಿಎಂ ಕುಮಾರಸ್ವಾಮಿ ಇಬ್ಬರು ಸಚಿವರಿಗೆ ಸೂಚನೆ ನೀಡಿದ್ದು. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತವಿರುವ ಹರ್ಯಾಣದ ಗುರುಗ್ರಾಮಕ್ಕೆ ಬಿಜೆಪಿ ಶಾಸಕರನ್ನು ಶಿಫ್ಟ್ ಮಾಡಲಾಗುತ್ತಿ ಎಂದು ತಿಳಿದುಬಂದಿದೆ.