ಬಿಜೆಪಿಗೂ ಶಾಸಕರನ್ನು ಕಳೆದುಕೊಳ್ಳುವ ಭಯ: ಶಾಸಕರು ದೆಹಲಿಯಿಂದ ಗುರುಗ್ರಾಮಕ್ಕೆ ಶಿಫ್ಟ್!

ಸಮ್ಮಿಶ್ರ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯುವುದಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ವರದಿಗಳು ಪ್ರಕಟವಾದ ಬೆನ್ನಲ್ಲೇ ಜೆಡಿಎಸ್-ಕಾಂಗ್ರೆಸ್ ಸಹ ಪ್ರತಿತಂತ್ರ ರೂಪಿಸಿದ್ದು, ಬಿಜೆಪಿ ಶಾಸಕರನ್ನೂ ಸೆಳೆಯಲು
ಬಿಜೆಪಿಗೂ ಶಾಸಕರನ್ನು ಕಳೆದುಕೊಳ್ಳುವ ಭಯ: ಶಾಸಕರು ದೆಹಲಿಯಿಂದ ಗುರುಗ್ರಾಮಕ್ಕೆ ಶಿಫ್ಟ್!
ಬಿಜೆಪಿಗೂ ಶಾಸಕರನ್ನು ಕಳೆದುಕೊಳ್ಳುವ ಭಯ: ಶಾಸಕರು ದೆಹಲಿಯಿಂದ ಗುರುಗ್ರಾಮಕ್ಕೆ ಶಿಫ್ಟ್!
ನವದೆಹಲಿ: ಸಮ್ಮಿಶ್ರ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯುವುದಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ವರದಿಗಳು ಪ್ರಕಟವಾದ ಬೆನ್ನಲ್ಲೇ ಜೆಡಿಎಸ್-ಕಾಂಗ್ರೆಸ್ ಸಹ ಪ್ರತಿತಂತ್ರ ರೂಪಿಸಿದ್ದು, ಬಿಜೆಪಿ ಶಾಸಕರನ್ನೂ ಸೆಳೆಯಲು ಯತ್ನಿಸುತ್ತಿವೆ. 
ಬಿಜೆಪಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವುದಕ್ಕೆ ದೆಹಲಿಯಲ್ಲಿ ಬೀಡು ಬಿಟ್ಟಿರುವ ಶಾಸಕರನ್ನು ಗುರುಗ್ರಾಮಕ್ಕೆ ಶಿಫ್ಟ್ ಮಾಡುತ್ತಿದೆ. ಸಂಜೆ 6 ಗಂಟೆಗೆ ಸಿದ್ಧವಾಗಿರುವಂತೆ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಶಾಸಕರಿಗೆ ಸೂಚನೆ ನೀಡಿದ್ದಾರೆ. ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಬಿಜೆಪಿ ಶಾಸಕರನ್ನು ಸೆಳೆಯುವುದಕ್ಕೆ ಸಿಎಂ ಕುಮಾರಸ್ವಾಮಿ ಇಬ್ಬರು ಸಚಿವರಿಗೆ ಸೂಚನೆ ನೀಡಿದ್ದು. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತವಿರುವ ಹರ್ಯಾಣದ ಗುರುಗ್ರಾಮಕ್ಕೆ ಬಿಜೆಪಿ ಶಾಸಕರನ್ನು ಶಿಫ್ಟ್ ಮಾಡಲಾಗುತ್ತಿ ಎಂದು ತಿಳಿದುಬಂದಿದೆ. 
ಬಿಜೆಪಿ ಜೊತೆ ಸಂಪರ್ಕದಲ್ಲಿರುವ 3 ಶಾಸಕರು ಮುಂಬೈ ನಲ್ಲಿದ್ದು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಸಚಿವ ಡಿಕೆ ಶಿವಕುಮಾರ್ ಆರೋಪಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com