ಕಳೆದ ವಾರ ನಡೆದಿದ್ದ ಆಯ್ಕೆ ಸಮಿತಿ ಸಭೆಯಲ್ಲಿ ಸಿಬಿಐ ಮುಖ್ಯಸ್ಥ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು. ಈ ಸಮಿತಿಯಲ್ಲಿ ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಪರವಾಗಿ ನ್ಯಾ. ಎ.ಕೆ. ಸಿಕ್ರಿ, ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ವರ್ಮಾ ಪದಚ್ಯುತಿಯ ಪರವಾಗಿ ಪ್ರಧಾನಿ ಮೋದಿ ಹಾಗೂ ನ್ಯಾಯಮೂರ್ತಿ ಸಿಕ್ರಿ ಮತ ಚಲಾಯಿಸಿದರೆ ಖರ್ಗೆ ಇದನ್ನು ವಿರೋಧಿಸಿದ್ದರು.