ಲೋಕಪಾಲ್ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಯಿತು. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಜೆಐ ರಂಜನ್ ಗಗೋಯ್, ನ್ಯಾ,ಎಲ್ ಎನ್ ರಾವ್ ಮತ್ತು ಎಸ್ ಕೆಕೌಲ್ ಅವರಿದ್ದ ತ್ರಿಸದಸ್ಯ ಪೀಠ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದ ಘಟನೆ ನಡೆಯಿತು.