ನವದೆಹಲಿ: ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡುವಂತೆ ಕೇರಳ ಪೊಲೀಸರಿಗೆ ಸುಪ್ರೀಂಕೋರ್ಟ್ ಇಂದು ತಾಕೀತು ಮಾಡಿದೆ. .ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಮತ್ತು ನ್ಯಾಯಾಧೀಶರಾದ ಎಲ್.ಎನ್. ರಾವ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.. ಈ ಇಬ್ಬರು ಮಹಿಳೆಯರಿಗೆ ಮಾತ್ರ ಈ ರೀತಿಯ ಭದ್ರತೆ ನೀಡಬೇಕು, ಇತರ ಯಾವುದೇ ಭಕ್ತಾಧಿಗಳು ಮನರಂಜನೆಗಾಗಿ ಈ ರೀತಿಯ ಅರ್ಜಿ ಸಲ್ಲಿಸುವಂತಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡುವಂತೆ ಕೇರಳ ಪೊಲೀಸರಿಗೆ ಸುಪ್ರೀಂಕೋರ್ಟ್ ಇಂದು ತಾಕೀತು ಮಾಡಿದೆ. .ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಮತ್ತು ನ್ಯಾಯಾಧೀಶರಾದ ಎಲ್.ಎನ್. ರಾವ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.. ಈ ಇಬ್ಬರು ಮಹಿಳೆಯರಿಗೆ ಮಾತ್ರ ಈ ರೀತಿಯ ಭದ್ರತೆ ನೀಡಬೇಕು, ಇತರ ಯಾವುದೇ ಭಕ್ತಾಧಿಗಳು ಮನರಂಜನೆಗಾಗಿ ಈ ರೀತಿಯ ಅರ್ಜಿ ಸಲ್ಲಿಸುವಂತಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ