ಕಳೆದ ಭಾನುವಾರ ತಡವಾಗಿ ಮನೆಗೆ ಬಂದ ಸದಾಶಿವ ಹರಿಜನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಪತ್ನಿ ಶಂಕಿಸಿದ್ದಳು. ಈ ಬಗ್ಗೆ ಈ ಹಿಂದೆ ಹಲವು ಬಾರಿ ಇವರಿಬ್ಬರ ನಡುವೆ ಜಗಳವಾಗಿತ್ತು. ಭಾನುವಾರ ರಾತ್ರಿಯೂ ಈ ಬಗ್ಗೆ ಮಾತಿನ ಚಕಮಕಿ ನಡೆದಿತ್ತು ಎಂದು ಹೇಳಲಾಗಿದೆ. ಸದಾಶಿವ ಹರಿಜನ್ ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಮನೆಗೆ ಬಂದಿದ್ದನಂತೆ. ಭಾನುವಾರ ರಾತ್ರಿ ಊಟ ಮಾಡಿ ಮಲಗಿದ್ದ ಅವನ ಮರ್ಮಾಂಗವನ್ನು ಹರಿತವಾದ ಚಾಕುವಿನಿಂದ ಗಂಗೀ ಕತ್ತರಿಸಿ ಹಾಕಿದ್ದಾಳೆ. ನೋವಿನಿಂದ ಕಿರುಚಾಡುತ್ತಿದ್ದ ಸದಾಶಿವನನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.