ಈ ಬಗ್ಗೆ ಮಾತನಾಡಿರುವ ಅವರು, 'ಭಾರತಲ್ಲಿ ಉದ್ಯೋಗ ಸೃಷ್ಟಿ, ರಸ್ತೆ ಕೊರತೆ ಗಂಭೀರ ಸಮಸ್ಯೆಗಳಾಗಿವೆ. ಕೃಷಿಯನ್ನು ಲಾಭದಾಯಕ ಕ್ಷೇತ್ರವಾಗಿ ಬದಲಿಸುವ, ನೀರಾವರಿ ಯೋಜನೆಗಳನ್ನು ಯಶಸ್ವಿಯಾಗಿಸುವ, ಪಟ್ಟಣ ನಿರ್ಮಾಣ, ಕೈಗಾರಿಕಾ ಅಭಿವೃದ್ಧಿ ಕುರಿತು ದೂರದೃಷ್ಟಿ ಹೊಂದಿರುವ ಪ್ರಬಲ ನಾಯಕರ ಅಗತ್ಯವಿದೆ. ಈ ದೇಶದಲ್ಲಿ ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಈ ಕೆಲಸಗಳನ್ನು ಮಾಡಬಲ್ಲ ನಾಯಕರು ಯಾರಾದರೂ ಇದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿನ್ಹಾ, ಯಾರೂ ಇಲ್ಲ ಎಂದು ಹೇಳುವ ಮೂಲಕ ತಾವು ಈ ಬಗ್ಗೆ ಕೆಲಸ ಮಾಡಲು ಸಿದ್ಧ ಎಂದು ಪರೋಕ್ಷವಾಗಿ ಹೇಳಿದ್ದಾರೆ. ನನ್ನ ಪ್ರಕಾರ ಅಂತಹ ವಿಚಾರ ಧಾರೆಗಳು ನನ್ನಲ್ಲಿದ್ದು, ಅವಕಾಶ ಸಿಕ್ಕರೆ ನಾನು ಕೆಲಸ ಮಾಡಲು ಸಿದ್ಧ ಎಂದು ಹೇಳಿದ್ದಾರೆ.