ಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ, ಪಿಯೂಷ್‌ ಗೋಯಲ್‌ಗೆ ಹೆಚ್ಚುವರಿಯಾಗಿ ಹಣಕಾಸು ಖಾತೆ

ವಿತ್ತ ಸಚಿವ ಅರುಣ್‌ ಜೇಟ್ಲಿ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಹಣಕಾಸು ಮತ್ತು ಕಾರ್ಪೋರೇಟ್‌ ವ್ಯವಹಾರಗಳ ಖಾತೆಯನ್ನು ತಾತ್ಕಾಲಿಕವಾಗಿ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ವಹಿಸಲಾಗಿದೆ. ಅವರೇ ಈ ಬಾರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.
ಪಿಯೂಷ್ ಗೋಯಲ್, ಅರುಣ್ ಜೇಟ್ಲಿ
ಪಿಯೂಷ್ ಗೋಯಲ್, ಅರುಣ್ ಜೇಟ್ಲಿ
ಹೊಸದಿಲ್ಲಿ: ವಿತ್ತ ಸಚಿವ ಅರುಣ್ ಜೇಟ್ಲಿ ನ್ಯೂಯಾರ್ಕ್ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಜನವರಿ 13 ರಂದು ಅಮೆರಿಕಾಕ್ಕೆ ತೆರಳಿದ್ದ ಅರುಣ್ ಜೇಟ್ಲಿ ಅವರಿಗೆ ಮೃದು ಅಂಗಾಂಶ ಕ್ಯಾನ್ಸರ್ ಬಗ್ಗೆ  ತಪಾಸಣೆ ಮಾಡಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ ಬುಧವಾರ ರಾಷ್ಟ್ರಪತಿ ಅವರು ಖಾತೆಯನ್ನು ಗೋಯಲ್‌ ಅವರಿಗೆ ವಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com