ಹೈಕೋರ್ಟ್ ಆದೇಶದ ಅನುಸಾರವಾಗಿ ನಾಗರಿಕ ಹಕ್ಕುಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಂಗ ಶ್ರೀನಿವಾಸ್ ರಾವ್ ಸುತ್ತೋಲೆ ಹೊರಡಿಸಿದ್ದು, ಕುಟುಂಬ ಸದಸ್ಯರು ಹಾಗೂ ಸಂಬಂಧಿಕರಿಂದ ಬೆದರಿಕೆ ಎದುರಿಸುತ್ತಿರುವ ಜೋಡಿಗಳಿಗೆ ಭದ್ರತೆ ನೀಡುವುದಕ್ಕೆ ಎಲ್ಲಾ ಎಸ್ ಪಿ ಹಾಗೂ ಪೊಲೀಸ್ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.