ಹರ್ಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ ಮನೆ ಮೇಲೆ ಸಿಬಿಐ ದಾಳಿ

ಭೂಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಸಂಬಂಧ ಸಿಬಿಐ ಅಧಿಕಾರಿಗಳು ಇಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡ ಅವರ ನಿವಾಸದ ...
ಭೂಪೇಂದ್ರ ಸಿಂಗ್ ಹೂಡಾ
ಭೂಪೇಂದ್ರ ಸಿಂಗ್ ಹೂಡಾ
ರೋಹ್ಟಕ್: ಭೂಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಸಂಬಂಧ ಸಿಬಿಐ ಅಧಿಕಾರಿಗಳು ಇಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 
ದೆಹಲಿಯ ಎನ್‌ಸಿಆರ್‌ ವಲಯದಲ್ಲಿನ 30ಕ್ಕೂ ಅಧಿಕ ತಾಣಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಕಳೆದ ವರ್ಷ ಡಿಸೆಂಬರ್‌ ನಲ್ಲಿ ಸಿಬಿಐ ಹೂಡ ವಿರುದ್ಧ ಚಾರ್ಜ್‌ ಶೀಟ್‌ ದಾಖಲಿಸಿತ್ತು. 2005ರಲ್ಲಿ ಹರಿಯಾಣದ ಪಂಚಕುಲದಲ್ಲಿ ಎಜೆಎಲ್‌ ಗೆ  ಸಾಂಸ್ಥಿಕ ಭೂ ಮರು ಹಂಚಿಕೆ ಮಾಡಲಾಗಿದ್ದ ಸಂಬಂಧ ಹೂಡ ವಿರುದ್ಧ ಸಿಬಿಐ ಕೇಸು ದಾಖಲಿಸಿಕೊಂಡಿತ್ತು. 
2004-07 ರಲ್ಲಿ ನಡೆದೆ ಭೂಅಕ್ರಮ ಗಳಿ ಸಂಬಂಧ ಈ ದಾಳಿ ನಡೆದಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com