ಪಾಟ್ನಾ: ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಾಗುತ್ತಿರುವ ಎನ್ ಡಿಎ ಮಿತ್ರಪಕ್ಷಗಳ ಪ್ರಮುಖ ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 2021ರಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಬೇಕೆಂದು ಕರೆ ನಿಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮತ್ತು ಇತರ ಹಿಂದುಳಿದ ವರ್ಗಗಳ ಜನಸಂಖ್ಯೆ ಈ ಹಿಂದೆ ದಾಖಲಾಗಿದ್ದ 1931ರ ಜನಗಣತಿಗಿಂತ ಹೆಚ್ಚಾಗಿದೆ.`ಹೀಗಾಗಿ ಇದೀಗ ಮತ್ತೆ ಜಾತಿಗಣತಿ ನಡೆಯಬೇಕು ಎಂದು ಅವರು ಹೇಳಿದ್ದಾರೆ.