ಈ ಬಗ್ಗೆ ತನ್ನ ಮುಖವಾಣಿ ಸಾಮ್ನಾದಲ್ಲಿ ಲೇಖನ ಬರೆದಿರುವ ಶಿವಸೇನೆ, ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಆಗಮನದ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಆನೆ ಬಲ ಬಂದಂತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಅಂತೆಯೇ ಪ್ರಿಯಾಂಕರನ್ನು ಸಕ್ರಿಯ ರಾಜಕಾರಣಕ್ಕೆ ತರುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಬೇಕಾದ ಎಲ್ಲರೀತಿಯ ತಂತ್ರಗಾರಿಕೆಯನ್ನೂ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ರಾಹುಲ್ ಪಕ್ವವಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಉತ್ತಮವಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ಶಿವಸೇನೆ ಹೇಳಿದೆ.