ನವದೆಹಲಿ: ಅಯೋಧ್ಯ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ರಾಜಕೀಯ ಸೂಕ್ಷ್ಮ ಪ್ರಕರಣದ ವಿಚಾರಣೆ ಜನವರಿ 29 ರಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದ್ದು, ಐವರು ನ್ಯಾಯಾಧೀಶರನ್ನೊಳಗೊಂಡ ಹೊಸ ಸಂವಿಧಾನಿಕ ಪೀಠವನ್ನು ಸ್ಥಾಪಿಸಲಾಗಿದೆ.
ಜನವರಿ 10 ರಂದು ರಚಿಸಲಾಗಿದ್ದ ಸಾಂವಿಧಾನಿಕ ಪೀಠದಲ್ಲಿದ್ದ ನ್ಯಾಯಾಧೀಶರಾದ ಯುಯು ಲಲಿತ್ 1997ರಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಪರ ವಕಲತ್ತು ವಹಿಸಿದ್ದ ಹಿನ್ನೆಲೆಯಲ್ಲಿ ಅಯೋಧ್ಯ ಸಂಬಂಧಿತ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಅವರೇ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಸಾಂವಿಧಾನಿಕ ಪೀಠವನ್ನು ಪುನರ್ ರಚಿಸಲಾಗಿದೆ.
Advertisement