ಪೌರತ್ವ ಮಸೂದೆಯನ್ನು ವಾಪಸ್ ಪಡೆಯದೇ ಇದ್ದರೆ ಎನ್ ಡಿಎ ಮೈತ್ರಿಕೂಟದಿಂಡ ಹೊರಬರುವುದಾಗಿ ಮಿಜೋ ನ್ಯಾಷನಲ್ ಫ್ರಂಟ್ ಮುಖ್ಯಸ್ಥ, ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಎಚ್ಚರಿಕೆ ನೀಡಿದ್ದಾರೆ. ಎಂ ಎನ್ ಎಫ್ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಝೊರಾಮ್ತಂಗ, ಮಸೂದೆಯನ್ನು ತಡೆಗಟ್ಟುವುದಕ್ಕೆ ತಮ್ಮ ಪಕ್ಷ ಹಾಗೂ ಸರ್ಕಾರ ಎಲ್ಲಾ ರೀತಿಯ ಯತ್ನವನ್ನೂ ಮಾಡುತ್ತಿದೆ ಎಂದು ಹೇಳಿದ್ದಾರೆ.