ಪ್ರಕರಣವನ್ನು ಪಂಚಸದಸ್ಯ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿದ್ದು, ನ್ಯಾಯಾಧೀಶರ ಅಲಭ್ಯತೆಯ ಕಾರಣದಿಂದಾಗಿ ಜ.29 ರ ವಿಚಾರಣೆಯನ್ನು ಮುಂದೂಡಲಾಗಿದೆ. ಜ.29 ರಂದು ನ್ಯಾ. ಎಸ್ಎ ಬೋಬ್ಡೆ ಲಭ್ಯವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾ. ರಂಜನ್ ಗೊಗೋಯ್ ನೇತೃತ್ವದ ಪೀಠ ಜ.29 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಿದೆ.