ನವದೆಹಲಿ: ಇತ್ತೀಚೆಗೆ ಪೂರ್ವ ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿ ನೇಮಕವಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಬೈಪೋಲಾರ್ ಮಾನಸಿಕ ಸಮಸ್ಯೆ ಇದೆ. ಅವರು ಜನರನ್ನು ಥಳಿಸುತ್ತಾರೆ ಎಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿರುವುದು ಹೊಸ ವಿವಾದವನ್ನು ಹುಟ್ಟು ಹಾಕಿದೆ.