ಬಿಜೆಪಿ ನೇತೃತ್ವದ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕಾಗಿ ಕಾನೂನು ಜಾರಿಗೆ ತಂದಿದ್ದೇ ಆದರೆ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ. ಆದರೆ ಒಂದು ವೇಳೆ ಕಾನೂನು ಜಾರಿಗೊಳಿಸಿದ್ದೇ ಆದಲ್ಲಿ, ಅದನ್ನು ಮತ್ತೊಬ್ಬರು ಕೋರ್ಟ್ ನಲ್ಲಿ ಪ್ರಶ್ನಿಸಬಹುದೆಂಬುದು ಕೇಂದ್ರ ಸರ್ಕಾರದ ಸದ್ಯದ ಯೋಚನೆಯಾಗಿರಬಹುದು ಎಂದು ಕೊಕ್ಜೆ ಹೇಳಿದ್ದಾರೆ.