ಇನ್ನು 2003ರಲ್ಲಿ ರಾಮ ಮಂದಿರಕ್ಕಾಗಿ ಅಯೋಧ್ಯೆಯಲ್ಲಿ ಶಿಲಾನ್ಯಾಸ ಪೂಜೆಗೆ ಅನುಮತಿ ನಿರಾಕರಿಸುವ ವೇಳೆ, ವಿವಾದಿತ ಭೂಮಿ ಹಾಗೂ ಸ್ವಾಧೀನ ಪಡಿಸಿಕೊಂಡ 67 ಎಕರೆ ಭೂಮಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. 67 ಎಕರೆಗೂ ಅಧಿಕ ಭೂಮಿಯಲ್ಲಿ ಬಹುಪಾಲನ್ನು ರಾಮಜನ್ಮಭೂಮಿ ಟ್ರಸ್ಟ್ ತನಗೆ ಸೇರಿದ್ದು ಎಂದು ವಾದಿಸಿತ್ತು. ಇದು ವಿವಾದ ರಹಿತ ಭೂಮಿಯಾಗಿದ್ದು, ಮೂಲ ಮಾಲೀಕರಿಗೆ ಬಿಟ್ಟುಕೊಡಬಹುದಾಗಿದೆ ಎಂದೂ ಹೇಳಿತ್ತು.