ಅಮರನಾಥ ಯಾತ್ರೆಗೆ ಯಾವುದೇ ಬೆದರಿಕೆ ಬಂದಿಲ್ಲ ಆದರೆ, ಮುಂಜಾಗ್ರತಾ ಕ್ರಮವಾಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. 40 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 400 ಸಿಸಿಟಿವಿಗಳು, ಸಿಆರ್ ಪಿಎಫ್ ಯೋಧರನ್ನೊಳಗೊಂಡ ವಿಶೇಷ ಮೋಟಾರ್ ಸೈಕಲ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಸಿಆರ್ ಪಿಎಫ್ ಇನ್ಸ್ ಪೆಕ್ಟರ್ ಜನರಲ್ ರವಿದೀಪ್ ಸಿಂಗ್ ಸಾಯಿ ಹೇಳಿದ್ದಾರೆ.